Friday, December 5, 2008

ಪ್ರಗತಿ ಸಿಂಡಿಕೇಟ್ ನಾಡಹಬ್ಬ

ಸಂಸ್ಥೆ: ಪ್ರಗತಿ ಸಿಂಡಿಕೇಟ್
ದಿನಾಂಕ: 16/11/2008

ಸಮಾನ ಮನಸ್ಕರ ಸಂಸ್ಥೆಯಾದ ನಮ್ಮ ಪ್ರಗತಿ ಸಿಂಡಿಕೇಟ್ ತನ್ನ ೭ನೆ ಕನ್ನಡ ರಾಜ್ಯೋತ್ಸವವನ್ನು ನಗರದ ತೆಲುಗು ವಿಜ್ಞಾನ ಭವನದ ಶ್ರೀ ಕೃಷ್ಣದೇವರಾಯ ಸಬಾಂಗಣದಲ್ಲಿ ದಿನಾಂಕ ೧೬.೧೧.೨೦೦೮ ರಂದು ಆಚರಿಸಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ. ಕೆ. ಇ .ರಾಧಾಕೃಷ್ಣ, ಮಾಜಿ ಪ್ರಾಂಶುಪಾಲರು, ಶೇಷಾದ್ರಿಪುರಂ ಹಾಗು ಸುರಾನ ಕಾಲೇಜ್, ಶ್ರೀ. ಎಂ.ಬಿ. ರಾಜೇಶ್ ಗೌಡ.ವಿಶೇಷ ಅಪರ ಭೂ ಸ್ವಾಧಿನಾಧಿಕಾರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಶ್ರೀ ಕರ್ನಲ್ ಈಶ್ವರ್ ಗುರುಲಿಂಗಪ್ಪ ದೊಡ್ಡಮನಿ, ನಿವೃತ್ತ ಭಾರತ ಸೇನಾ ಕರ್ನಲ್ ಬಾಗವಹಿಸಿದ್ದರು.

ಪ್ರತಿ ವರ್ಷದಂತೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನು ಗುರುತಿಸಿ ಅಭಿನಂದಿಸಿವುದು ಹಾಗು ಅವರನ್ನು ಇನ್ನು ಹೆಚ್ಚಿನ ಸಾಧನೆಗೆ ಪ್ರೋತ್ಸಾಹಿಸುವುದು ಪ್ರಗತಿ ಸಿಂಡಿಕೇಟ್ ನ ಧ್ಯೇಯೋದೇಶಗಳಲ್ಲಿ ಒಂದು. ಈ ಸಾಲಿನಲ್ಲಿ ಶ್ರೀಮತಿ. ಎಂ. ಅರ್. ಕಮಲ, ಖ್ಯಾತ ಕವಯತ್ರಿ, ಡಾ: ಕೆ.ಜಗನ್ಮಯ, ಖ್ಯಾತ ವೈದ್ಯರು ಮತ್ತು ಕೆ. ನರಸಿಂಹಮೂರ್ತಿ, ಸಮಾಜ ಸೇವಕರು ಇವರುಗಳಿಗೆ ಕರ್ನಾಟಕ ಸಹೃದಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಶ್ರೀ. ಕೆ ಪ್ರಹ್ಲಾದ ಶೆಟ್ಟಿ ಇವರಿಗೆ ಪ್ರಗತಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಡಾ: ಲಲಿತ ಭಾಸ್ಕರ್, ಖ್ಯಾತ ವೈದ್ಯರು, ಶ್ರೀಮತಿ ಶಾಂತ ಕುಮಾರಿ, ಖ್ಯಾತ ಸಾಹಿತಿಗಳು, ಶ್ರೀ. ಎಸ್. ರವಿಂದ್ರ, ಭರತ್ ಕಶ್ಯಪ್ ಟ್ರಸ್ಟ್ ,ಶ್ರೀ. ರವಿಶಂಕರ್, ಶ್ರೀ.ಶಂಕರ್ ಭಟ್, ಶ್ರೀ. ಶ್ರೀಕಂಠ ಗುಂಡಪ್ಪ ಆಗಮಿಸಿದ್ದರು.

ರಾಜ್ಯೋತ್ಸವ ಕಾರ್ಯಕ್ರಮದ ಜೊತೆಗೆ ರಕ್ತದಾನ ಶಿಬಿರ ಅಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಗತಿ ಸಿಂಡಿಕೇಟ್ ನ ವಿವಿಧ ಶಾಖೆಗಳಾದ ಮತ್ತಿಕೆರೆ , ಮಲ್ಲೇಶ್ವರಂ, ಸಂಜಯನಗರ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಭಾಗವಹಿಸಿದ್ದವು. ಮಲ್ಲೇಶ್ವರಂ ತಂಡಕ್ಕೆ ಪ್ರಥಮ ಬಹುಮಾನ,ಸಂಜಯನಗರ ತಂಡಕ್ಕೆ ದ್ವಿತೀಯ ಬಹುಮಾನ ದೊರಕಿದವು.

ಇಡೀ ಕಾರ್ಯಕ್ರಮವು ಶ್ರೀ. ಕೆ.ಜಿ. ಶ್ರೀನಿವಾಸಮೂರ್ತಿ ಹಾಗು ಶ್ರೀ. ಸಿ.ಎನ್.ರಮೇಶ್ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿತು

ಚಿತ್ರಗಳು:


ಹೆಚ್ಚಿನ ಚಿತ್ರಗಳಿಗೆ ಇಲ್ಲಿ ಕ್ಲಿಕ್ಕಿಸಿ:
http://picasaweb.google.com/loyalvares/PragathiSyndicateKannadaRajyotsava_16Nov08?authkey=x2SBPN9zWFw#

ನಿಮ್ಮ ಸಂಸ್ಥೆಯಲ್ಲೂ ನಾಡ ಹಬ್ಬ ನಡೆದಿತ್ತಾ?, ಅದರ ವರದಿ ಇಲ್ಲಿ ಬರಬೇಕಾ? ಹಾಗಿದ್ರೆ ಅದರ ವರದಿಯನ್ನು, ಕೂಡಲೆ kannadahabba@gmail.com ವಿಳಾಸಕ್ಕೆ ಮಿಂಚಿಸಿ.

No comments:

Post a Comment